Wednesday, February 12, 2025

ಲೈಂಗಿಕ ದೌರ್ಜನ್ಯ ಆರೋಪಿ ಸಲಾಂ ಬಂಧನ: ವಿಟ್ಲ ಎಸ್.ಐ.ಯಲ್ಲಪ್ಪ ಕಾರ್ಯಚರಣೆ

ಬಂಟ್ವಾಳ; ಮಾಣಿ ಬಾಲಕಿಯೋರ್ವಳ ಲೈಂಗಿಕ ದೌರ್ಜನ್ಯ  ಪ್ರಕರಣ ವೊಂದಕ್ಕೆ ಸಂಭವಿಸಿದಂತೆ ಆರೋಪಿ ಯನ್ನು ವಿಟ್ಲ ಠಾಣಾ ಎಸ್ ಐ ಯಲ್ಲಪ್ಪ ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.‌
ಮಾಣಿ ನಿವಾಸಿ ಅಬ್ದುಲ್ ಸಲಾಂ ಯಾನೆ ಸಲಾಂ ( 38) ಬಂಧಿತ ಆರೋಪಿ.‌
ಕಳೆದ ವಾರ ಮಾಣಿಯ ಬಾಲಕಿಯೋರ್ವಳು ಮೊಬೈಲ್ ಅಂಗಡಿಗೆ ಮೊಬೈಲ್ ಕರೆನ್ಸಿ ಹಾಕಲು ಬಂದ ವೇಳೆ ಬಾಲಕಿಯ ಲೈಂಗಿಕ ದೌರ್ಜನ್ಯ ಮಾಡಿದ್ದಾನೆ ಎಂದು ಆರೋಪಿಸಿ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅ ಬಳಿಕ ಅನೇಕ ಊಹಾಪೋಹಗಳು ಕೂಡ ಬಂದಿತ್ತು.‌
ಪ್ರಕರಣವನ್ನು ಕೈಗೆತ್ತಿಕೊಂಡ ವಿಟ್ಲ ಠಾಣಾ ಎಸ್.ಐ.ಯಲ್ಲಪ್ಪ ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.‌
ತಲೆ ಮರೆಸಿಕೊಂಡು ಪೋಲೀಸರಿಗೆ ತಲೆನೋವಾಗಿದ್ದ ಆರೋಪಿ ಯನ್ನು ಇಂದು ಮದ್ಯಾಹ್ನ ಗಡಿಯಾರ ಜಂಕ್ಸ್ ನ್  ಬಳಿಯಲ್ಲಿ ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಆರೋಪಿಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಾರ್ಯಚರಣೆ ಯಲ್ಲಿ ಸಿಬ್ಬಂದಿ ಗಳಾದ ಜಯಕುಮಾರ್, ಬಾಲಕೃಷ್ಣ, ಲೋಕೇಶ್, ರಕ್ಷಿತ್ ಭಾಗವಹಿಸಿದ್ದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...