Tuesday, January 27, 2026

ಡಿ.16ರಂದು ಕೇಪು ಕಜಂಬು ಜಾತ್ರೋತ್ಸವ

ವಿಟ್ಲ: ವಿಟ್ಲ ಸಮೀಪದ ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿದೆ. ಮಕ್ಕಳನ್ನೇ ಸಾಂಕೇತಿಕವಾಗಿ ದೇವಿಗೆ ಹರಕೆ ರೂಪದಲ್ಲಿ ಸಮರ್ಪಿಸಿ ಪಡೆಯುವ ವಿಶಿಷ್ಟ ನಂಬಿಕೆ, ಸಂಪ್ರದಾಯ ‘ಕಜಂಬು’ ಉತ್ಸವ ಡಿ.16ರಂದು ನಡೆಯಲಿದೆ. ಕಜಂಬು ಹರಕೆ ನೆರವೇರಿದ ಬಳಿಕ ಶ್ರೀ ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.
ಮಕ್ಕಳನ್ನು ದೇವರಿಗೆ ಹರಕೆ ರೂಪದಲ್ಲಿ ಸಾಂಕೇತಿಕವಾಗಿ ಒಪ್ಪಿಸುವ ವಿಶಿಷ್ಟ ಸಂಪ್ರದಾಯವೇ ‘ಕಜಂಬು’. ವಿಟ್ಲ ಸೀಮೆಗೆ ಸಂಬಂಧಪಟ್ಟ ಗ್ರಾಮದ ಭಕ್ತಾದಿಗಳು ಹಾಗೂ ಹರಕೆ ಹೇಳಿಕೊಂಡ ಭಕ್ತರು ಸಾತ್ವಿಕ ಆಹಾರ, ಫಲಾಹಾರದ ಕಡ್ಡಾಯ 1 ದಿನದ ವ್ರತ ಅನುಷ್ಠಾನದಲ್ಲಿರಬೇಕು. (ಸಣ್ಣ ಮಗುವಾದರೆ ತಾಯಿ ಕೂಡಾ ವೃತಾಚರಣೆಯಲ್ಲಿರಬೇಕು.)
ಮಧ್ಯಾಹ್ನ ಸಣ್ಣ ಉಳ್ಳಾಲ್ತಿ ಮತ್ತು ದೊಡ್ಡ ಉಳ್ಳಾಲ್ತಿ (ಎಲ್ಯಕ್ಕೆ ಮತ್ತು ಮಲ್ಲಕ್ಕೆ)ಯ ಮೂರ್ತಿಗಳೊಂದಿಗೆ ದೇವಿಗೆ ಆಭರಣ, ಭಂಡಾರಗಳು ವಿಟ್ಲ ಅರಮನೆಯಿಂದ ದೇವಾಲಯ ಸೇರುತ್ತದೆ. ಕಜಂಬು ಜಾತ್ರೋತ್ಸವದ ರಾತ್ರಿ ದೇವಾಲಯಕ್ಕೆ ಪೂರ್ಣಕುಂಭ ಸ್ವಾಗತದಲ್ಲಿ ವಿಟ್ಲ ಅರಮನೆಯಿಂದ ಅರಸು ವಂಶದ ಹಿರಿಯರ ಆಗಮನವಾದ ಬಳಿಕ, ದೇವಿಗೆ ಮಹಾ ಮಂಗಳಾರತಿ ನಡೆಯುತ್ತದೆ. ದೇವಾಲಯದ ಹಿಂದೆ ಹರಿಯುತ್ತಿರುವ ಕಿರು ಹೊಳೆಯಲ್ಲಿ ಹರಕೆ ಹೊತ್ತ ಮಕ್ಕಳನ್ನು ಜಳಕ ಮಾಡಿಸಿ ಸಿದ್ಧರಾಗಿ ದೇವಾಲಯದ ಮುಂಭಾಗದಲ್ಲಿ ಸೇರುತ್ತಾರೆ. ದೇವಿಯರ ಪಲ್ಲಕ್ಕಿ ಉತ್ಸವ ನಡೆದ ಬಳಿಕ ಸಂಪ್ರದಾಯದಂತೆ ದೇವಿಯ ಗುಡಿಗೆ ಅಡ್ಡಬಿದ್ದು ಅಂಗಣದ ನಾಲ್ಕೂ ದಿಕ್ಕುಗಳಲ್ಲಿ ದೇವರ ಕೆಲಸ ಮಾಡುವ `ನಾಲ್ಪೋಳು’É ಎಂಬ ದೈವಮಾನಿಗಳಿಗೆ ಕಾಣಿಕೆಯಿತ್ತು, ತೆರಳಿದ ನಂತರ ದೇವರ ಗರ್ಭಗುಡಿಯ ಮೆಟ್ಟಿಲಿಗೆ ಮಕ್ಕಳ ತಲೆಯನ್ನು ಸ್ಪರ್ಶಿಸಿ ಹರಕೆ ಒಪ್ಪಿಸಿಕೊಳ್ಳುತ್ತಾರೆ.
ಆದರೆ ಈ ಬಾರಿ ಕೋವಿಡ್ ನಿಯಮ ಜಾರಿಯಲ್ಲಿರುವ ಕಾರಣ ಕ್ಷೇತ್ರದಲ್ಲಿ ಹರಕೆ ಸಲ್ಲಿಸುವ ಮಕ್ಕಳಿಗೆ ಪವಿತ್ರ ಜಲ ಪ್ರೋಕ್ಷಣೆ ಮಾಡುವ ಮೂಲಕ ‘ಕಜಂಬು’ ಹರಕೆ ಸಮರ್ಪಣೆ ಮಾಡಲಾಗುತ್ತಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...