Friday, January 30, 2026

ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಚಿನ್ಮಯಿ ರಾಜ್ಯಕ್ಕೆ ದ್ವಿತೀಯ ರ್‍ಯಾಂಕ್ : ಸತತ ೧೬ನೇ ವರ್ಷ ನಿರಂತರ ಶೇ. ನೂರು ಫಲಿತಾಂಶ ಹೆಗ್ಗಳಿಕೆ

ವಿಟ್ಲ: ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಚಿನ್ಮಯಿ ೬೨೪ ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗುವುದರೊಂದಿಗೆ ಅದ್ವಿತೀಯ ಸಾಧನೆ ಮೆರೆದಿದ್ದಾರೆ. ಇದರೊಂದಿಗೆ ಶಾಲೆ ಸತತ ೧೬ ನೇ ವರ್ಷ ಸತತ ನೂರು ಶೇ. ಫಲಿತಾಂಶವನ್ನು ಪಡೆದ ಹೆಗ್ಗಳಿಕೆಯನ್ನು ಹೊಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಲ್.ಎನ್.ಕೂಡೂರು ತಿಳಿಸಿದರು.
ಅವರು ಮಂಗಳವಾರ ಫಲಿತಾಂಶದ ಬಳಿಕ ಶಾಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶಾಲೆ ನಡೆದು ಬಂದ ದಾರಿಯ ಬಗ್ಗೆ ಮಾತನಾಡಿದರು.
ಶಿಕ್ಷಣ ಸಂಸ್ಥೆಯ ಪ್ರಿನ್ಸಿಪಾಲ್ ಜಯರಾಮ ರೈ ಸಾಧನೆಯ ಬಗ್ಗೆ ಅಂಕಿ ಅಂಶ ನೀಡಿ ಈ ಬಾರಿ ೯೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ ಚಿನ್ಮಯಿ ೬೨೪ ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಶಾಲೆಯ ನವ್ಯಶ್ರೀ ೬೨೧ ಅಂಕ ಗಳಿಸಿದರೆ, ಕಾರ್ತಿಕ್ ಶೆಟ್ಟಿ ಹಾಗೂ ಪುಷ್ಪರಾಜ್ ೬೨೦ ಅಂಕ ಗಳಿಸಿದ್ದಾರೆ. ಈ ಪೈಕಿ ೪೧ ವಿದ್ಯಾರ್ಥಿಗಳು ಎ ಪ್ಲಸ್ ಶ್ರೇಣಿಯಲ್ಲಿ, ೩೮ ವಿದ್ಯಾರ್ಥಿಗಳು ಎ ಶ್ರೇಣಿಯಲ್ಲಿ, ೧೫ ಬಿ ಪ್ಲಸ್ ಶ್ರೇಣಿಯಲ್ಲಿ, ೪ ವಿದ್ಯಾರ್ಥಿಗಳು ಬಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕನ್ನಡ ವಿಷಯದಲ್ಲಿ ೯ ವಿದ್ಯಾರ್ಥಿಗಳು ೧೨೫ ಪೂರ್ಣ ಅಂಕ ಗಳಿಸಿದ್ದಾರೆ. ಇಂಗ್ಲೀಷ್‌ನಲ್ಲಿ ೧೦, ಹಿಂದಿಯಲ್ಲಿ ೪, ಗಣಿತದಲ್ಲಿ ೪, ವಿಜ್ಞಾನದಲ್ಲಿ ೧, ಸಮಾಜ ವಿಜ್ಞಾನದಲ್ಲಿ ೪ ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆಡಳಿತಾಧಿಕಾರಿ ಮೋನಪ್ಪ ಶೆಟ್ಟಿ, ಜತೆ ಕಾರ್‍ಯದರ್ಶಿ ಶ್ರೀಪ್ರಕಾಶ್ ಕುಕ್ಕಿಲ, ಗೋಕುಲ್ ಶೇಟ್ ಉಪಸ್ಥಿತರಿದ್ದರು.

 

ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡುವಾಸೆ- ಚಿನ್ಮಯಿ: ವಿಟ್ಲ ಕೂಡೂರು ರಾಜನಾರಾಯಣ ಗೀತಾ ದಂಪತಿಗಳ ಪುತ್ರಿಯಾದ ಚಿನ್ಮಯಿಗೆ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡುವ ಆಸೆಯಿದೆಯಂತೆ. ಆ ನಿಟ್ಟಿನ ಸಾಧನೆಗೆ ಪೂರಕವಾಗುವಂತೆ ಶಿಕ್ಷಣ ಪೂರೈಸುತ್ತೇನೆ ಎನ್ನುವ ಆಕೆ ಶಾಲೆಯಲ್ಲಿ ಪ್ರತೀದಿನ ಕೇಳಿದ ಪಾಠವನ್ನೇ ಮನೆಯಲ್ಲಿ ಮನನವಾಗುವ ತನಕ ನಿರಂತರವಾಗಿ ಅಭ್ಯಾಸ ಮಾಡುತ್ತಿದೆ. ನನಗೆ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಬೇಕೆನ್ನುವ ಉತ್ಕಟವಾದ ಇಚ್ಛಗೆ ಮನೆ ಹಾಗೂ ಶಾಲೆಯ ವಾತಾವರಣ ಪೂರಕವಾಯಿತು ಎಂದು ಸಂತಸ ವ್ಯಕ್ತ ಪಡಿಸಿದರು.

More from the blog

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...