ವಿಟ್ಲ: ಸೋಲುಗೆಲುವುಗಳೆರೆಡನ್ನೂ ಜೀವನದಲ್ಲಿ ಸಮಾನ ಸವಾಲಾಗಿ ಸ್ವೀಕರಿಸಿದಾಗ ಮಾತ್ರ ಯಶಸ್ಸಿನೊಂದಿ ಗುರಿ ಈಡೇರಿಸಲು ಸಾಧ್ಯ ಎಂದು ಸಂಸ್ಕೃತ ಶಿಕ್ಷಕ ಕೃಷ್ಣ ಭಟ್ ಹೇಳಿದರು.
ಅವರು ವಿಟ್ಲ ಜೆಸಿಐ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಡೆದ ವಿಟ್ಲ-ಕಂಬಳಬೆಟ್ಟು ಕ್ಲಸ್ಟರ್ಗಳ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಮಾತನಾಡಿ ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ನೈಜ ಪ್ರತಿಭೆಗಳನ್ನು ಹೊರ ತರುವ ವೇದಿಕೆಯಾಗಿದೆ. ಪ್ರತಿಭೆಗಳ ಶೋಧನೆ ಪಾರದರ್ಶಕವಾಗಿ ನಡೆಯಬೇಕು ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಧರ ಕೊಡಕ್ಕಲ್ ವಹಿಸಿದ್ದರು.
ಸಮಾರಂಭದಲ್ಲಿ ಶಾಲಾ ಆಡಳಿತಾಧಿಕಾರಿ ರಾಧಾಕೃಷ್ಣ ಎ., ನಿವೃತ್ತ ಆಡಳಿತಾಧಿಕಾರಿ ಮೋನಪ್ಪ ಶೆಟ್ಟಿ ದೇವಸ್ಯ, ಸಂಸ್ಥೆಯ ವೈಸ್ ಪ್ರಿನ್ಸಿಪಾಲ್ ಶಾಲಿನಿ ನೋಂಡ ಭಾಗವಹಿಸಿದ್ದರು.
ಶಿಕ್ಷಣ ಸಂಸ್ಥೆಯ ಪ್ರಿನ್ಸಿಪಾಲ್ ಜಯರಾಮ ರೈ ಸ್ವಾಗತಿಸಿದರು. ವಿಟ್ಲ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರವಿಪ್ರಕಾಶ್ ಪ್ರಸ್ತಾವಿಸಿದರು. ಕಂಬಳಬೆಟ್ಟು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಕೆ. ಸಾರ್ ವಂದಿಸಿದರು. ಸಹ ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

