Tuesday, January 27, 2026

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ

ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳಮುಖ್ಯ,ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು..

ಅವರು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ (ರಿ.)ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ ದಲ್ಲಿ ಅತಿಥಿ ಯಾಗಿ ಭಾಗವಹಿಸಿ ಮಾತಾಡಿದರು.

ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ( ರಿ.)ಮಾಣಿ ಯ ಮಹಿಳಾ ಅಧ್ಯಕ್ಷೆ ಹರಿನಾಕ್ಷಿ ಮುರುವ ನೆರೆವೇರಿಸಿದರು.,. ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ,ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.)ಮಾಣಿ ಯ ಅಧ್ಯಕ್ಷರಾದ ಸುರೇಶ್ ಸೂರ್ಯ,ಯುವವಾಹಿನಿ( ರಿ.) ಮಾಣಿ ಘಟಕದ ಮಹಿಳಾ ನಿರ್ದೇಶಕರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಮೊದಲಾದವರು ಉಪಸ್ಥಿತರಿದ್ದರು.. ಸಂಪನ್ಮೂಲ ವ್ಯಕ್ತಿಗಳಾಗಿ “ಸ್ವಸ್ಥ ಮಹಿಳೆ- ಸ್ವಸ್ಥ ಮನೆ” ಎಂಬ ವಿಚಾರವಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್,ಮಹಿಳೆಯರಿಗೆ ಆಗುವ ಅರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ನೀಡಿ,ಮಹಿಳೆಯರೊಂದಿಗೆ ಮುಕ್ತವಾಗಿ ಚರ್ಚಿಸಿದರು. “ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ “ಎಂಬ ವಿಷಯದ ಬಗ್ಗೆ ವಕೀಲರು, ನೋಟರಿ ಆದ ಶೋಭಾಲತಾ ಸುವರ್ಣ ವಿಚಾರ ವಿನಿಮಯ ಮಾಡಿ ಕಾನೂನನ್ನು ದುರುಪಯೋಗ ವಾಗದೆ ಸದುಪಯೋಗ ಪಡೆದುಕೊಳ್ಳಬೇಕು, ನಮ್ಮನ್ನು ಮೊದಲು ನಾವು ಅರ್ಥ ಮಾಡಿಕೊಳ್ಳಬೇಕು,ಸಂಸ್ಕಾರ ಯುಕ್ತವಾಗಿ ಜೀವನ ಸಾಗಿಸಿದರೆ ಯಾವ ಕಾನೂನಿನ ರಕ್ಷಣೆ ಅಗತ್ಯವಿಲ್ಲ ವೆಂದರು. ಕಾರ್ಯಕ್ರಮದಲ್ಲಿ ಸಂಘದ 10 ಗ್ರಾಮಗಳ ಮಹಿಳಾ ಅಧ್ಯಕ್ಷರುಗಳನ್ನು, ಮಾಜಿ ಅಧ್ಯಕ್ಷರುಗಳನ್ನು, ಪಂಚಾಯತ್ ಸದಸ್ಯೆರುಗಳನ್ನು ಅಭಿನಂದಿಸಾಲಾಯಿತು, ಸಂಘದ ಸದಸ್ಯೆ ಭಾರತೀ ಪ್ರಾರ್ಥಿಸಿ,ಯುವವಾಹಿನಿ(ರಿ.) ಮಾಣಿ ಘಟಕದ ಕಾರ್ಯದರ್ಶಿ ಶಾಲಿನಿ ಸ್ವಾಗತಿಸಿ,ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮುಜಲ ಕಾರ್ಯಕ್ರಮದ ಪ್ರಸ್ತಾವಿಕ ಮಾಡಿ, ಸದಸ್ಯೆಯಾದ ಶುಭ ಪೆರ್ನೆ ವಂದಿಸಿದರು. ಮಾಣಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಉಷಾ ದಿನಕರ್ ಹಾಗೂ ಘಟಕದ ಸದಸ್ಯ ರಾಜೇಶ್ ಬಲ್ಯ ಕಾರ್ಯಕ್ರಮ ನೀರೂಪಿಸಿದರು…

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಪುದು ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ದ. ಕ. ಜಿ. ಪಂ. ಮಾ. ಹಿ. ಪ್ರಾ. ಶಾಲೆ ಪುದು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮ್ಲಾನ್ ಅವರು ಧ್ವಜಾರೋಹಣ...