Tuesday, February 11, 2025

ಅಳಿಕೆ ಶ್ರೀಸತ್ಯಸಾಯಿ ಪ್ರೌಢಶಾಲೆಗೆ ವಂಡರ್‌ಲಾ ಪ್ರಶಸ್ತಿ

ವಿಟ್ಲ: ವಂಡರ್‌ಲಾ ಹಾಲಿಡೇಸ್ ಸಂಸ್ಥೆಯ ಪ್ರತಿಷ್ಠಿತ ಪರಿಸರ ಮತ್ತು ಇಂಧನ ಸಂರಕ್ಷಣೆ ಪ್ರಶಸ್ತಿಯನ್ನು ಕರ್ನಾಟಕ ಮತ್ತು ತಮಿಳುನಾಡಿನ ಶಾಲೆಗಳಿಗೆ ನೀಡಲಾಗಿದ್ದು, ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ದ್ವಿತೀಯ ಬಹುಮಾನ ಪಡೆದುಕೊಂಡಿದೆ. ೨೫ ಸಾವಿರ ರೂ. ನಗದು ಬಹುಮಾನಕ್ಕೆ ಭಾಜನವಾಗಿದೆ.
ತಮಿಳುನಾಡು ಹೊಸೂರಿನ ಮಹರ್ಷಿ ವಿದ್ಯಾಮಂದಿರ ಪ್ರಥಮ ಬಹುಮಾನ ೫೦ ಸಾವಿರ ರೂ. ತೃತೀಯ ಸ್ಥಾನವನ್ನು ದಾವಣಗೆರೆಯ ಅನ್ಮೋಲ್ ಪಬ್ಲಿಕ್ ಸ್ಕೂಲ್ ಗದಗ ಜಿಲ್ಲೆ ಮತ್ತು ಗೋಜನೂರಿನ ಸರಕಾರಿ ಪ್ರೌಢಶಾಲೆ ಪಡೆದುಕೊಂಡಿದೆ.
ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ, ಅಳಿಕೆ ವಂಡರ್‌ಲಾದ ಪ್ರತಿಷ್ಠಿತ ಪ್ರಶಸ್ತಿಯನ್ನು ನಾಲ್ಕನೇ ಬಾರಿ ಪಡೆದುಕೊಳ್ಳುತ್ತಿರುವುದು ಹೆಗ್ಗಳಿಕೆಯೆನಿಸಿದೆ. ಮುಖ್ಯ ಶಿಕ್ಷಕ ರಘು ಟಿ.ವೈ ಮತ್ತು ಶಿಕ್ಷಕರ, ಮಕ್ಕಳ ನಿರಂತರ ಪ್ರಯತ್ನ ಮತ್ತು ಆಡಳಿತ ಮಂಡಳಿಯ ಸಂಪೂರ್ಣ ಸಹಕರಿಸಿತ್ತು. 2018-19ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಮಿತ್ರ ಶಾಲೆ ಪ್ರಶಸ್ತಿಯನ್ನು ಪಡೆದು ಕೊಂಡಿತ್ತು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...