Friday, July 4, 2025

ಅಳಿಕೆ ಶ್ರೀಸತ್ಯಸಾಯಿ ಪ್ರೌಢಶಾಲೆಗೆ ವಂಡರ್‌ಲಾ ಪ್ರಶಸ್ತಿ

ವಿಟ್ಲ: ವಂಡರ್‌ಲಾ ಹಾಲಿಡೇಸ್ ಸಂಸ್ಥೆಯ ಪ್ರತಿಷ್ಠಿತ ಪರಿಸರ ಮತ್ತು ಇಂಧನ ಸಂರಕ್ಷಣೆ ಪ್ರಶಸ್ತಿಯನ್ನು ಕರ್ನಾಟಕ ಮತ್ತು ತಮಿಳುನಾಡಿನ ಶಾಲೆಗಳಿಗೆ ನೀಡಲಾಗಿದ್ದು, ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ದ್ವಿತೀಯ ಬಹುಮಾನ ಪಡೆದುಕೊಂಡಿದೆ. ೨೫ ಸಾವಿರ ರೂ. ನಗದು ಬಹುಮಾನಕ್ಕೆ ಭಾಜನವಾಗಿದೆ.
ತಮಿಳುನಾಡು ಹೊಸೂರಿನ ಮಹರ್ಷಿ ವಿದ್ಯಾಮಂದಿರ ಪ್ರಥಮ ಬಹುಮಾನ ೫೦ ಸಾವಿರ ರೂ. ತೃತೀಯ ಸ್ಥಾನವನ್ನು ದಾವಣಗೆರೆಯ ಅನ್ಮೋಲ್ ಪಬ್ಲಿಕ್ ಸ್ಕೂಲ್ ಗದಗ ಜಿಲ್ಲೆ ಮತ್ತು ಗೋಜನೂರಿನ ಸರಕಾರಿ ಪ್ರೌಢಶಾಲೆ ಪಡೆದುಕೊಂಡಿದೆ.
ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ, ಅಳಿಕೆ ವಂಡರ್‌ಲಾದ ಪ್ರತಿಷ್ಠಿತ ಪ್ರಶಸ್ತಿಯನ್ನು ನಾಲ್ಕನೇ ಬಾರಿ ಪಡೆದುಕೊಳ್ಳುತ್ತಿರುವುದು ಹೆಗ್ಗಳಿಕೆಯೆನಿಸಿದೆ. ಮುಖ್ಯ ಶಿಕ್ಷಕ ರಘು ಟಿ.ವೈ ಮತ್ತು ಶಿಕ್ಷಕರ, ಮಕ್ಕಳ ನಿರಂತರ ಪ್ರಯತ್ನ ಮತ್ತು ಆಡಳಿತ ಮಂಡಳಿಯ ಸಂಪೂರ್ಣ ಸಹಕರಿಸಿತ್ತು. 2018-19ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಮಿತ್ರ ಶಾಲೆ ಪ್ರಶಸ್ತಿಯನ್ನು ಪಡೆದು ಕೊಂಡಿತ್ತು.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...