Wednesday, February 12, 2025

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವಿಶ್ವ ಜಲ ದಿನಾಚರಣೆ

ಬಂಟ್ವಾಳ: ಎಲ್ಲಾ ಜೀವರಾಶಿಗಳ ಜೀವ ಜಲ ನೀರಿನ ಸಧ್ಸಳಕೆ ಮತ್ತು ನೀರಿಂಗಿಸುವ ಕ್ರಮದ ಮೂಲಕ ನೀರನ್ನು ಕಾಪಾಡಬೇಕೆಂದು ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ ಹೇಳಿದರು. ಕಲುಷಿತ ನೀರಿನಿಂದ ಸಾಂಕ್ರಾಮಿಕ ಯೋಗದಿಂದ ತೊಂದರೆ ,ಜೀವ ಹಾನಿಯಾಗುತ್ತಿದೆ. ನಮ್ಮಲ್ಲಿ ನೀರಿನ ಸಂರಕ್ಷಣೆ ಮಾಡುವ ವಿಧಾನ ಅಳವಡಿಸಿಕೊಳ್ಳಲು ಅವಕಾಶ  ಇದೆ. ರೋಟರಿ ಸಂಸ್ಥೆ ಯ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
         ಅವರು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಸಭಾಂಗಣ ಬಿ ಸಿ ರೋಡಿನಲ್ಲಿ ನಡೆದ ವಿಶ್ವ ಜಲ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಉಮೇಶ್ ನಿರ್ಮಲ್ ವಿಶ್ವ ಜಲ ದಿನದ ಅಂಗವಾಗಿ ನರಿಕೊಂಬು ಗ್ರಾಮದ 10 ಅಂಗನವಾಡಿಗಳಿಗೆ ಶುದ್ಧ ಕುಡಿಯುವ ನೀರಿನ ಕೊಡುಗೆ ನೀಡುವ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ತಿತರಿದ್ದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...