Saturday, January 31, 2026

ಯಕ್ಷ ನೃತ್ಯ ತರಗತಿ ಆರಂಭ

ಸರಪಾಡಿ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕೇಸರಿ ಯುವಕ ಮಂಡಲದ ಆಶ್ರಯದಲ್ಲಿ ಯಕ್ಷಗಾನ ನ್ರತ್ಯ ತರಭೇತಿ ಕೇಂದ್ರವು ಇಂದು ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಇವರಿಂದ ಉದ್ಘಾಟಿಸಲ್ಪಟ್ಟಿತು. ಅವರು ಮಾತಾಡುತ್ತಾ ಕಲಿಕಾ ಆಸಕ್ತರು ಶ್ರದ್ದೆ ಹಾಗೂ ಶಿಸ್ತಿನಿಂದ ಕಲಿಯುವಂತ ವಾತಾವರಣ ಸೃಷ್ಠಿ ಮಾಡಬೇಕು ಪ್ರೇರಣೆ ನೀಡುವ ಸಮರ್ಥ ಗುರುವಿನಿಂದ ಕಲಿಯಬೇಕು.ಕಲಿಯುವವ ಮೊದಲು ಉತ್ತಮ ಪ್ರೇಕ್ಷಕನಾದರೆ ಅವನೇ ಉತ್ತಮಕಲಾವಿದ ನಾಗುತ್ತಾನೆ ಎಂದು ಹೇಳಿದರು. ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ,ಪಡ್ಡಾಯಿ ಮಜಲು, ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ ಬೆಂಗತ್ಯಾರು,ಬಿ ಜೆ ಪಿ ನಾಯಕ ಆನಂದ ಶೆಟ್ಟಿ ಬಾಚಕೆರೆ, ರಾಜೇಂದ್ರ ಪೂಜಾರಿ ಕಡಮಜೆ, ಕಿಶೋರ್ ಕುಮಾರ್ ಹಠಡಡ್ಕ,ಮತ್ತು ತರಬೇತುದಾರ ಶಶಿಧರ ಬಾಚಕೆರೆ ಉಪಸ್ಥಿತರಿದ್ದರು. ಕಾರ್ಯಕ್ರಮ ಆಯೋಜಕ
ಪುರುಷೋತ್ತಮ ಪೂಜಾರಿ ಮಜಲು ನಿರೂಪಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...