Thursday, February 13, 2025

ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಹೊಂದಿರುವ ಯಶಸ್ವಿ .ಕೆ. ಗೆ ೫೭೬ ಅಂಕ

ಬಂಟ್ವಾಳ, ಎ. ೩೦: ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಹೊಂದಿರುವ ಬಂಟ್ವಾಳ ತಾಲೂಕಿನ ಕೆದಿಲ ನಿವಾಸಿ ಯಶಸ್ವಿ ಕೆ. ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. ೯೨.೧೬ ಅಂಕ ಗಳಿಸಿ ಸಾಧನೆ ಮೆರೆದಿದ್ದಾಳೆ.
ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ವಿಭಾಗದ ಲ್ಯಾಬ್ ಅಸಿಸ್ಟೆಂಟ್ ತಿಮ್ಮಪ್ಪ ಮೂಲ್ಯ ಕೆ. ಮತ್ತು ಪೆರ್ನೆ ಗ್ರಾಮ ಕಾರ್ಲ ಹಿ.ಪ್ರಾ. ಶಾಲಾ ಶಿಕ್ಷಕಿ ಯಶೋಧಾ ದಂಪತಿಯ ದ್ವಿತೀಯ ಪುತ್ರಿ ಯಶಸ್ವಿ, ಕಡೇಶ್ವಾಲ್ಯ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ೫೭೬ ಅಂಕ ಗಳಿಸಿದ್ದಾಳೆ.
ಶ್ರವಣ ಶಕ್ತಿ ಕೊರತೆ ಇರುವ, ಮಾತನಾಡಲು ಕಷ್ಟಪಡುವ ಈಕೆ ಅದ್ಭುತ ಏಕಾಗ್ರತೆ ಹೊಂದಿದ್ದಾಳೆ. ಹುಟ್ಟಾ ಶ್ರವಣದೋಷವಿದ್ದ ಈಕೆಯನ್ನು ಹೆತ್ತವರು ವಿಶೇಷ ಮುತುವರ್ಜಿ ವಹಿಸಿ ಓದು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿದ್ದಾರೆ. ಚೆಸ್‌ನಲ್ಲಿ ಈಕೆಗೆ ಇದ್ದ ವಿಶೇಷ ಆಸಕ್ತಿ ಗಮನಿಸಿದ ಹೆತ್ತವರು ಪುತ್ತೂರಿನಲ್ಲಿ ಚೆಸ್ ತರಬೇತಿ ನೀಡುತ್ತಿದ್ದು, ೩ ವರ್ಷಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆ ಮಾಡಿದ್ದಾಳೆ.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...