Sunday, June 29, 2025

ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಹೊಂದಿರುವ ಯಶಸ್ವಿ .ಕೆ. ಗೆ ೫೭೬ ಅಂಕ

ಬಂಟ್ವಾಳ, ಎ. ೩೦: ವಾಕ್ ಮತ್ತು ಶ್ರವಣ ಸಮಸ್ಯೆಯನ್ನು ಹೊಂದಿರುವ ಬಂಟ್ವಾಳ ತಾಲೂಕಿನ ಕೆದಿಲ ನಿವಾಸಿ ಯಶಸ್ವಿ ಕೆ. ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. ೯೨.೧೬ ಅಂಕ ಗಳಿಸಿ ಸಾಧನೆ ಮೆರೆದಿದ್ದಾಳೆ.
ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ವಿಭಾಗದ ಲ್ಯಾಬ್ ಅಸಿಸ್ಟೆಂಟ್ ತಿಮ್ಮಪ್ಪ ಮೂಲ್ಯ ಕೆ. ಮತ್ತು ಪೆರ್ನೆ ಗ್ರಾಮ ಕಾರ್ಲ ಹಿ.ಪ್ರಾ. ಶಾಲಾ ಶಿಕ್ಷಕಿ ಯಶೋಧಾ ದಂಪತಿಯ ದ್ವಿತೀಯ ಪುತ್ರಿ ಯಶಸ್ವಿ, ಕಡೇಶ್ವಾಲ್ಯ ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದು, ಎಸೆಸೆಲ್ಸಿ ಪರೀಕ್ಷೆಯಲ್ಲಿ ೫೭೬ ಅಂಕ ಗಳಿಸಿದ್ದಾಳೆ.
ಶ್ರವಣ ಶಕ್ತಿ ಕೊರತೆ ಇರುವ, ಮಾತನಾಡಲು ಕಷ್ಟಪಡುವ ಈಕೆ ಅದ್ಭುತ ಏಕಾಗ್ರತೆ ಹೊಂದಿದ್ದಾಳೆ. ಹುಟ್ಟಾ ಶ್ರವಣದೋಷವಿದ್ದ ಈಕೆಯನ್ನು ಹೆತ್ತವರು ವಿಶೇಷ ಮುತುವರ್ಜಿ ವಹಿಸಿ ಓದು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿದ್ದಾರೆ. ಚೆಸ್‌ನಲ್ಲಿ ಈಕೆಗೆ ಇದ್ದ ವಿಶೇಷ ಆಸಕ್ತಿ ಗಮನಿಸಿದ ಹೆತ್ತವರು ಪುತ್ತೂರಿನಲ್ಲಿ ಚೆಸ್ ತರಬೇತಿ ನೀಡುತ್ತಿದ್ದು, ೩ ವರ್ಷಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆ ಮಾಡಿದ್ದಾಳೆ.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...