Friday, July 4, 2025

ಕಲ್ಲಡ್ಕದ ಮಹಮ್ಮದ್ ಯಾಸಿರ್ ಗೆ ಆರ್ಯಭಟ ಪ್ರಶಸ್ತಿ

ಬಂಟ್ವಾಳ:
ಕಲ್ಲಡ್ಕದ ಯುವ ಉದ್ಯಮಿ, ಹಳೆಯ ವಸ್ತು ಸಂಗ್ರಹಾಲಯದ ಮೂಲಕ ಗಮನ ಸೆಳೆದಿರುವ ಮಹಮ್ಮದ್ ಯಾಸೀರ್ ವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.


ದೂರದರ್ಶನದ ನಿರ್ದೇಶಕ ನಾಡೋಜ ಮಹೇಶ್ ಜೋಶಿ, ಜಸ್ಟೀಸ್ ಹೆಚ್.ಎನ್.ನಾಗಮೋಹನದಾಸ್, ಎಸ್.ಎ.ಚಿನ್ನೇಗೌಡ, ಹೆಚ್.ಎಲ್.ಎನ್.ರಾವ್, ಆರ್ಯಭಟ ಸಂಸ್ಥೆಯ ಭವಾನಿ ಶಂಕರ ಆಚಾರ್ಯ ಮೊದಲಾದವರು ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡರು.
ರಾಜ್ಯದ ಕೆಲವೇ ಕೆಲವು ನೋಟು, ನಾಣ್ಯ ಸಹಿತ ಕರೆನ್ಸಿ ಸಂಗ್ರಾಹಕರಲ್ಲಿ ಯಾಸೀರ್ ಒಬ್ಬರಾಗಿ ಗುರುತಿಸಿಕೊಂಡವರು.ಇವರ ಸಂಗ್ರಹದಲ್ಲಿ ದೀವಟಿಗೆಯಿಂದ ಹಿಡಿದು, ಪಾತ್ರೆಪಗಡಗಳು ಮಾತ್ರವಲ್ಲದೆ, ಸಾಫ್ಟ್ ಡ್ರಿಂಕ್ಸ್ಬಾಟಲಿಗಳಿಂದ ಹಿಡಿದು ಸ್ಟ್ಯಾಂಪುಗಳು ಸಹಿತ ವೈವಿಧ್ಯತೆಯಿಂದ ಕೂಡಿದೆ. ಲೋಕಲ್ ಸಾಫ್ಟ್ ಡ್ರಿಂಕ್ ಬಾಟಲಿಗಳು ಎನಿಂದ ಝಡ್ ವರೆಗೆ, ಹಳೆದದಿನಬಳಕೆಯ ವಸ್ತುಗಳಿಂದ ಹೊಸವಸ್ತುಗಳವರೆಗಿನ ಯಾಸೀರ್ ಸಂಗ್ರಹ ನೋಡುಗರ ಕಣ್ತುಂಬುವಂತಿದೆ. ಇವರ ಅಪರೂಪದ ವಸ್ತು ಸಂಗ್ರಹ, ನಾಣ್ಯ ಕರೆನ್ಸಿಗಳ ಸಂಗ್ರಹ ಹಲವೆಡೆಗಳಲ್ಲಿ ಪ್ರದರ್ಶನಗೊಂಡು ಎಲ್ಲರ ಮೆಚ್ಚುಗೆಗೂ ಪಾತ್ರವಾಗಿದೆ. ಇದೀಗ ಆರ್ಯಭಟ ಪ್ರಶಸ್ತಿ ಇವರ ಸಾಧನೆಗೆ ಮತ್ತೊಂದು ಶಹಬ್ಬಾಸ್ ಗಿರಿ ದೊರೆತಂತಾಗಿದೆ.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...