Monday, February 10, 2025

ಕಲ್ಲಡ್ಕದ ಮಹಮ್ಮದ್ ಯಾಸಿರ್ ಗೆ ಆರ್ಯಭಟ ಪ್ರಶಸ್ತಿ

ಬಂಟ್ವಾಳ:
ಕಲ್ಲಡ್ಕದ ಯುವ ಉದ್ಯಮಿ, ಹಳೆಯ ವಸ್ತು ಸಂಗ್ರಹಾಲಯದ ಮೂಲಕ ಗಮನ ಸೆಳೆದಿರುವ ಮಹಮ್ಮದ್ ಯಾಸೀರ್ ವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.


ದೂರದರ್ಶನದ ನಿರ್ದೇಶಕ ನಾಡೋಜ ಮಹೇಶ್ ಜೋಶಿ, ಜಸ್ಟೀಸ್ ಹೆಚ್.ಎನ್.ನಾಗಮೋಹನದಾಸ್, ಎಸ್.ಎ.ಚಿನ್ನೇಗೌಡ, ಹೆಚ್.ಎಲ್.ಎನ್.ರಾವ್, ಆರ್ಯಭಟ ಸಂಸ್ಥೆಯ ಭವಾನಿ ಶಂಕರ ಆಚಾರ್ಯ ಮೊದಲಾದವರು ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡರು.
ರಾಜ್ಯದ ಕೆಲವೇ ಕೆಲವು ನೋಟು, ನಾಣ್ಯ ಸಹಿತ ಕರೆನ್ಸಿ ಸಂಗ್ರಾಹಕರಲ್ಲಿ ಯಾಸೀರ್ ಒಬ್ಬರಾಗಿ ಗುರುತಿಸಿಕೊಂಡವರು.ಇವರ ಸಂಗ್ರಹದಲ್ಲಿ ದೀವಟಿಗೆಯಿಂದ ಹಿಡಿದು, ಪಾತ್ರೆಪಗಡಗಳು ಮಾತ್ರವಲ್ಲದೆ, ಸಾಫ್ಟ್ ಡ್ರಿಂಕ್ಸ್ಬಾಟಲಿಗಳಿಂದ ಹಿಡಿದು ಸ್ಟ್ಯಾಂಪುಗಳು ಸಹಿತ ವೈವಿಧ್ಯತೆಯಿಂದ ಕೂಡಿದೆ. ಲೋಕಲ್ ಸಾಫ್ಟ್ ಡ್ರಿಂಕ್ ಬಾಟಲಿಗಳು ಎನಿಂದ ಝಡ್ ವರೆಗೆ, ಹಳೆದದಿನಬಳಕೆಯ ವಸ್ತುಗಳಿಂದ ಹೊಸವಸ್ತುಗಳವರೆಗಿನ ಯಾಸೀರ್ ಸಂಗ್ರಹ ನೋಡುಗರ ಕಣ್ತುಂಬುವಂತಿದೆ. ಇವರ ಅಪರೂಪದ ವಸ್ತು ಸಂಗ್ರಹ, ನಾಣ್ಯ ಕರೆನ್ಸಿಗಳ ಸಂಗ್ರಹ ಹಲವೆಡೆಗಳಲ್ಲಿ ಪ್ರದರ್ಶನಗೊಂಡು ಎಲ್ಲರ ಮೆಚ್ಚುಗೆಗೂ ಪಾತ್ರವಾಗಿದೆ. ಇದೀಗ ಆರ್ಯಭಟ ಪ್ರಶಸ್ತಿ ಇವರ ಸಾಧನೆಗೆ ಮತ್ತೊಂದು ಶಹಬ್ಬಾಸ್ ಗಿರಿ ದೊರೆತಂತಾಗಿದೆ.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...