Tuesday, January 27, 2026

ನೇರಳಕಟ್ಟೆ: ’ವೈಸಿಜಿ ನೈಟ್’ ಪಂದ್ಯಾಟ

ವಿಟ್ಲ: ಯುವಮನಸ್ಸುಗಳು ಒಂದಾದರೆ ಸಾಮಾಜಿಕ ಅಭಿವೃದ್ಧಿಯ ಕಾರ್‍ಯ ನಡೆಸಲು ಸಾಧ್ಯ. ಇಲ್ಲಿನ ಯುವಕರ ತಂಡ ಶಿಕ್ಷಣ, ರಕ್ಷಣೆ ಹಾಗೂ ಆರೋಗ್ಯ ಕ್ಷೇತ್ರದ ಸಾಧಕರನ್ನು ತನ್ನ ಕಾರ್‍ಯಕ್ರಮದಲ್ಲಿ ಗುರುತಿಸುವ ಮೂಲಕ ಮಹತ್ತರ ಕಾರ್‍ಯ ನಡೆಸಿದೆ ಎಂದು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಹೇಳಿದರು.
ನೇರಳಕಟ್ಟೆ ಶ್ರೀ ಕಲ್ಕುಡ ಕಲ್ಲುರ್ಟಿ ಜಾತ್ರೋತ್ಸವದ ಅಂಗವಾಗಿ ನೇರಳಕಟ್ಟೆ ಗಣೇಶ ನಗರದ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ’ವೈಸಿಜಿ ನೈಟ್-2019’ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿವೃತ್ತ ಮುಖ್ಯ ಶಿಕ್ಷಕ ರಾಮಚಂದ್ರ ಮೂಲ್ಯ ಮಾತನಾಡಿ, ವೈಸಿಜಿ ತಂಡ ಮಾದರಿಯಾದ ಕಾರ್‍ಯಕ್ರಮದ ಮೂಲಕ ದೇಶಭಕ್ತಿ ಮೆರೆದಿದೆ ಎಂದು ಶ್ಲಾಘಿಸಿದರು.
ಚಲನಚಿತ್ರ ನಟ ಚಂದ್ರಹಾಸ ರೈ ಕರಿಂಕ, ಕಬಕ ಶಾಲೆಯ ಮುಖ್ಯ ಶಿಕ್ಷಕಿ ಸುಲೋಚನಾ ಡಿ.ರೈ, ಸಹ ಶಿಕ್ಷಕಿ ಕೋಮಲಾಂಗಿ, ಉದ್ಯಮಿ ನಿತಿನ್ ಅರ್ಬಿ, ಅಂಗನವಾಡಿ ಶಿಕ್ಷಕಿ ವಸಂತಿ ಮುಖ್ಯ ಅತಿಥಿಯಾಗಿದ್ದರು.
ಕಾರ್‍ಯಕ್ರಮದಲ್ಲಿ ನಿವೃತ್ತ ಸೈನಿಕ ಜನಾರ್ದನ ಕುಲಾಲ್, ನಾಟಿವೈದ್ಯ ಸಚ್ಚಿದಾನಂದ ಶೆಟ್ಟಿ, ಪ್ರಗತಿಪರ ಕೃಷಿಕ ಚಂದಪ್ಪ ಮಾಸ್ಟರ್ ಅವರನ್ನು ಅತಿಥಿಗಳು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ತಿಲಕ್‌ರಾಜ್ ಶೆಟ್ಟಿಯವರ ವೈದ್ಯಕೀಯ ಚಿಕಿತ್ಸೆಗೆ ಸಂಘದ ವತಿಯಿಂದ ನೆರವಿನ ಮೊತ್ತ ನೀಡಲಾಯಿತು.
ಸಂಘದ ಅಧ್ಯಕ್ಷ ವಿಶುಕುಮಾರ್ ಎನ್, ಗೌರವಾಧ್ಯಕ್ಷ ಜಯಂತ ಆಚಾರ್‍ಯ, ಗೌರವ ಕಾರ್‍ಯದರ್ಶಿಗಳಾದ ಶೀತಲ್ ಕೆ.ವಿ., ಮೋಹನ್ ಆಚಾರ್‍ಯ, ಉಪಾಧ್ಯಕ್ಷ ಪ್ರಶಾಂತ್ ಬಿ., ಕೋಶಾಧಿಕಾರಿ ಸತೀಶ್ ಆಚಾರ್‍ಯ, ಪದಾಧಿಕಾರಿಗಳಾದ ಲೋಕೇಶ್ ಆಚಾರ್‍ಯ, ಕಿರಣ್ ಕುಮಾರ್, ಹರೀಶ್, ಸುನಿಲ್, ಶರತ್ ಆಚಾರ್‍ಯ, ಗೌರೀಶ್, ಗೌರವ ಸಲಹೆಗಾರರಾದ ಡಿ.ಕೆ.ಸ್ವಾಮಿ, ನಾಗರಾಜ ಶೆಟ್ಟಿ ಮಾಣಿ, ಚೇತನ್ ರೈ, ಜಗದೀಶ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗೌರವ ಸಲಹೆಗಾರ ಭೋಜನಾರಾಯಣ ಸ್ವಾಗತಿಸಿದರು. ಕಾರ್‍ಯದರ್ಶಿ ಉಪೇಂದ್ರ ಆಚಾರ್‍ಯ ವಂದಿಸಿ, ಶಿಕ್ಷಕ ಗೋಪಾಲಕೃಷ್ಣ ಕಾರ್‍ಯಕ್ರಮ ನಿರೂಪಿಸಿದರು.
ಸಭಾ ಕಾರ್‍ಯಕ್ರಮಕ್ಕೆ ಮುನ್ನ ಶಾರದಾ ಕಲಾಶಾಲೆ ನೇರಳಕಟ್ಟೆ ತಂಡದ ಕಲಾವಿದರಿಂದ ನೃತ್ಯಸಂಭ್ರಮ ಹಾಗೂ ಸಭಾ ಕಾರ್‍ಯಕ್ರಮದ ಬಳಿಕ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ’ಪಾಂಡುನ ಅಲಕ್ಕ ಪೋಂಡು’ ತುಳು ಹಾಸ್ಯ ನಾಟಕ ನಡೆಯಿತು.

 

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...